ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ


ಧರ್ಮಸ್ಥಳ: ಶ್ರೀ ಧ ಮ ಆಂಗ್ಲ ಮಾಧ್ಯಮ ಧರ್ಮಸ್ಥಳದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪರಿಸರ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಹಾಡು ನೃತ್ಯ , ಭಾಷಣ ಅಭಿನಯ ಗೀತೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಮುಖ್ಯ ಅತಿಥಿಯಾಗಿ ಶ್ರೀ ಧ ಮ ತಾಂತ್ರಿಕ ವಿದ್ಯಾಲಯದ ಮುಖ್ಯ ಗ್ರಂಥಪಾಲಕಿ ಡಾ .ರಜತ ಪಿ. ಶೆಟ್ಟಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ಸೂಚಿಸಿ ,ಪ್ರಕ್ರತಿಯ ನಡುವೆ ಮಕ್ಕಳು ಹೇಗೆ ಬೆಳೆಯಬೇಕು ಎಂಬುದನ್ನು ಎಳೆ ಎಳೆಯಾಗಿ ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದೊಂದಿಗೆ ಮೂಡಿಬಂದ ಕಾರ್ಯಕ್ರಮ, ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಗಿ , ಶಾಲಾ ವಿದ್ಯಾರ್ಥಿನಿ ಕು| ಸಾನ್ವಿತ ಹಾಗೂ ಸಮನ್ವೀ ಸ್ವಾಗತಿಸಿದರು . ಕುಮಾರಿ ಶ್ರೇಯಸಿ ಹಾಗೂ ವಿಹಾನ್ ಕಾರ್ಯಕ್ರಮವನ್ನು ನಿರೂಪಿಸಿ, ಸಾನಿಧ್ಯ ಹಾಗೂ ಆರುಹಿ ಧನ್ಯವಾದವನ್ನು ಅರ್ಪಿಸಿದರು. ಶಾಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಸಹಕರಿಸಿದರು.

Related posts

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

Suddi Udaya

ಹಿರಿಯರ ಚಿಂತನ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!