26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಉಜಿರೆ : “ನಮ್ಮ ದೇಶದ ಬಗ್ಗೆ ಹೆಮ್ಮೆ ಇರಬೇಕು. ನಮ್ಮ ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಅಗ್ರಿಲೀಫ್ ಪ್ರೈವೇಟ್ ಲಿಮಿಟೆಡ್ ನ ಸಿಬ್ಬಂದಿ ಮುಖ್ಯಸ್ಥರಾದ ಶ್ರೀಮತಿ ಪೃಥ್ವಿ ಕಾರಿಂಜೆ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶಭಕ್ತಿ ಗೀತೆ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಾದ ದೀಪಿಕಾ ಹಾಗೂ ಶ್ರೇಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಆಶುತೋಷ್.ಎಮ್ ರಾವ್ ವಂದಿಸಿದರು.

Related posts

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!