25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!