ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya
error: Content is protected !!