September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ತುಳು ಸಂಸ್ಕೃತಿ ಕುರಿತ ಕಾರ್ಯಕ್ರಮ ‘ಆಟಿಡೊಂಜಿ ದಿನ’ ಆ.13ರಂದು ನಡೆಯಿತು.

ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಅವರು ದೀಪ ಬೆಳಗಿ, ಹಿಂಗಾರ ಅರಳಿಸಿ, ಚೆನ್ನೆಮಣೆ ಆಡುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಆಟಿ ತಿಂಗಳ ಮಹತ್ವ, ತಿಂಡಿ ತಿನಿಸು, ಆರೋಗ್ಯದ ಹಿನ್ನೆಲೆ ಇರುವ ಪದಾರ್ಥಗಳು ಹಾಗೂ ಆಟಿ ಅಮಾವಾಸ್ಯೆ ಬಗ್ಗೆ ತಿಳಿಸಿದರು.

ತುಳು ಭಾಷಾ ಶಿಕ್ಷಕಿ ತ್ರಿವೇಣಿ ಅವರು ಆಟಿ ತಿಂಗಳಿನಲ್ಲಿ ನಡೆಯುವ ದೈವಾರಾಧನೆ, ನಾಗಾರಾಧನೆ ಬಗ್ಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ಸುರೇಶ್ ಕೆ. ಅವರು ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ತುಳು ಜಾನಪದ ನೃತ್ಯ, ಕವಿತೆ ಮುಂತಾದ ಮನೋರಂಜನೆ ಕಾರ್ಯಕ್ರಮ ನೀಡಿದರು.

ವಿದ್ಯಾರ್ಥಿಗಳಾದ ನಿಶ್ಮಿತ್, ಸ್ವಾಗತಿಸಿ, ರಕ್ಷಿತಾ ವಂದಿಸಿ, ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!