23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ತುಳು ಸಂಸ್ಕೃತಿ ಕುರಿತ ಕಾರ್ಯಕ್ರಮ ‘ಆಟಿಡೊಂಜಿ ದಿನ’ ಆ.13ರಂದು ನಡೆಯಿತು.

ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಅವರು ದೀಪ ಬೆಳಗಿ, ಹಿಂಗಾರ ಅರಳಿಸಿ, ಚೆನ್ನೆಮಣೆ ಆಡುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಆಟಿ ತಿಂಗಳ ಮಹತ್ವ, ತಿಂಡಿ ತಿನಿಸು, ಆರೋಗ್ಯದ ಹಿನ್ನೆಲೆ ಇರುವ ಪದಾರ್ಥಗಳು ಹಾಗೂ ಆಟಿ ಅಮಾವಾಸ್ಯೆ ಬಗ್ಗೆ ತಿಳಿಸಿದರು.

ತುಳು ಭಾಷಾ ಶಿಕ್ಷಕಿ ತ್ರಿವೇಣಿ ಅವರು ಆಟಿ ತಿಂಗಳಿನಲ್ಲಿ ನಡೆಯುವ ದೈವಾರಾಧನೆ, ನಾಗಾರಾಧನೆ ಬಗ್ಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ಸುರೇಶ್ ಕೆ. ಅವರು ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ತುಳು ಜಾನಪದ ನೃತ್ಯ, ಕವಿತೆ ಮುಂತಾದ ಮನೋರಂಜನೆ ಕಾರ್ಯಕ್ರಮ ನೀಡಿದರು.

ವಿದ್ಯಾರ್ಥಿಗಳಾದ ನಿಶ್ಮಿತ್, ಸ್ವಾಗತಿಸಿ, ರಕ್ಷಿತಾ ವಂದಿಸಿ, ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya
error: Content is protected !!