March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ರೂ 1000 ಮೊತ್ತವನ್ನು ಒಳಗೊಂಡ ಅಂಚೆ ಕಛೇರಿಯ ಪಾಸ್ ಪುಸ್ತಕ ನೀಡುವ ಯೋಜನೆ , ಬ್ಯಾಂಡ್ ಸೆಟ್ಟಿನ 15 ವಿದ್ಯಾರ್ಥಿಗಳಿಗೆ ಟೋಪಿ ವಿತರಣೆ, ಬಾಬುಶೆಟ್ಟಿ ನಿವೃತ್ತ ಕನ್ನಡ ಭಾಷಾ ಶಿಕ್ಷಕರು ವಿರಚಿತ 10 ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.,ಎಮ್.ಸಿ ಅಧ್ಯಕ್ಷ ಕನಕವರ್ಮ ಜೈನ್, ಭೋಜೇಗೌಡ ಪ್ರಗತಿಪರ ರೈತರು, ಅರ್ವ, ನಿರಂಜನ್ ನಿಕಟ ಪೂರ್ವ ಅಧ್ಯಕ್ಷರು ಲಯನ್ಸ್ ಕ್ಲಬ್ ವೇಣೂರು, ರಾಮಚಂದ್ರ ಭಟ್ ನಿಕಟ ಪೂರ್ವ ಅಧ್ಯಕ್ಷರು ಎಸ್.ಡಿ.ಎಮ್.ಸಿ, ನಿಮಿತ್ ಜೈನ್ ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ, ನಾರಾವಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಮರ್ದೋಟ್ಟು ಹಾಗೂ ಸುದರ್ಶನ್ ಹೆಗ್ಡೆ , ಹಳೆ ವಿದ್ಯಾರ್ಥಿ ಯಾದ ಶಿವರಾಜ್ ಅಂಚನ್ , ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಶ್ರೀ ಧ ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ, ಪ್ರಧಾನ ಗುರುಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!