ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ರೂ 1000 ಮೊತ್ತವನ್ನು ಒಳಗೊಂಡ ಅಂಚೆ ಕಛೇರಿಯ ಪಾಸ್ ಪುಸ್ತಕ ನೀಡುವ ಯೋಜನೆ , ಬ್ಯಾಂಡ್ ಸೆಟ್ಟಿನ 15 ವಿದ್ಯಾರ್ಥಿಗಳಿಗೆ ಟೋಪಿ ವಿತರಣೆ, ಬಾಬುಶೆಟ್ಟಿ ನಿವೃತ್ತ ಕನ್ನಡ ಭಾಷಾ ಶಿಕ್ಷಕರು ವಿರಚಿತ 10 ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.,ಎಮ್.ಸಿ ಅಧ್ಯಕ್ಷ ಕನಕವರ್ಮ ಜೈನ್, ಭೋಜೇಗೌಡ ಪ್ರಗತಿಪರ ರೈತರು, ಅರ್ವ, ನಿರಂಜನ್ ನಿಕಟ ಪೂರ್ವ ಅಧ್ಯಕ್ಷರು ಲಯನ್ಸ್ ಕ್ಲಬ್ ವೇಣೂರು, ರಾಮಚಂದ್ರ ಭಟ್ ನಿಕಟ ಪೂರ್ವ ಅಧ್ಯಕ್ಷರು ಎಸ್.ಡಿ.ಎಮ್.ಸಿ, ನಿಮಿತ್ ಜೈನ್ ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ, ನಾರಾವಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಮರ್ದೋಟ್ಟು ಹಾಗೂ ಸುದರ್ಶನ್ ಹೆಗ್ಡೆ , ಹಳೆ ವಿದ್ಯಾರ್ಥಿ ಯಾದ ಶಿವರಾಜ್ ಅಂಚನ್ , ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಶ್ರೀ ಧ ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ, ಪ್ರಧಾನ ಗುರುಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya
error: Content is protected !!