July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ರೂ 1000 ಮೊತ್ತವನ್ನು ಒಳಗೊಂಡ ಅಂಚೆ ಕಛೇರಿಯ ಪಾಸ್ ಪುಸ್ತಕ ನೀಡುವ ಯೋಜನೆ , ಬ್ಯಾಂಡ್ ಸೆಟ್ಟಿನ 15 ವಿದ್ಯಾರ್ಥಿಗಳಿಗೆ ಟೋಪಿ ವಿತರಣೆ, ಬಾಬುಶೆಟ್ಟಿ ನಿವೃತ್ತ ಕನ್ನಡ ಭಾಷಾ ಶಿಕ್ಷಕರು ವಿರಚಿತ 10 ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.,ಎಮ್.ಸಿ ಅಧ್ಯಕ್ಷ ಕನಕವರ್ಮ ಜೈನ್, ಭೋಜೇಗೌಡ ಪ್ರಗತಿಪರ ರೈತರು, ಅರ್ವ, ನಿರಂಜನ್ ನಿಕಟ ಪೂರ್ವ ಅಧ್ಯಕ್ಷರು ಲಯನ್ಸ್ ಕ್ಲಬ್ ವೇಣೂರು, ರಾಮಚಂದ್ರ ಭಟ್ ನಿಕಟ ಪೂರ್ವ ಅಧ್ಯಕ್ಷರು ಎಸ್.ಡಿ.ಎಮ್.ಸಿ, ನಿಮಿತ್ ಜೈನ್ ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ, ನಾರಾವಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಮರ್ದೋಟ್ಟು ಹಾಗೂ ಸುದರ್ಶನ್ ಹೆಗ್ಡೆ , ಹಳೆ ವಿದ್ಯಾರ್ಥಿ ಯಾದ ಶಿವರಾಜ್ ಅಂಚನ್ , ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಶ್ರೀ ಧ ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ, ಪ್ರಧಾನ ಗುರುಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya
error: Content is protected !!