26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ರೂ 1000 ಮೊತ್ತವನ್ನು ಒಳಗೊಂಡ ಅಂಚೆ ಕಛೇರಿಯ ಪಾಸ್ ಪುಸ್ತಕ ನೀಡುವ ಯೋಜನೆ , ಬ್ಯಾಂಡ್ ಸೆಟ್ಟಿನ 15 ವಿದ್ಯಾರ್ಥಿಗಳಿಗೆ ಟೋಪಿ ವಿತರಣೆ, ಬಾಬುಶೆಟ್ಟಿ ನಿವೃತ್ತ ಕನ್ನಡ ಭಾಷಾ ಶಿಕ್ಷಕರು ವಿರಚಿತ 10 ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.,ಎಮ್.ಸಿ ಅಧ್ಯಕ್ಷ ಕನಕವರ್ಮ ಜೈನ್, ಭೋಜೇಗೌಡ ಪ್ರಗತಿಪರ ರೈತರು, ಅರ್ವ, ನಿರಂಜನ್ ನಿಕಟ ಪೂರ್ವ ಅಧ್ಯಕ್ಷರು ಲಯನ್ಸ್ ಕ್ಲಬ್ ವೇಣೂರು, ರಾಮಚಂದ್ರ ಭಟ್ ನಿಕಟ ಪೂರ್ವ ಅಧ್ಯಕ್ಷರು ಎಸ್.ಡಿ.ಎಮ್.ಸಿ, ನಿಮಿತ್ ಜೈನ್ ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ, ನಾರಾವಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಮರ್ದೋಟ್ಟು ಹಾಗೂ ಸುದರ್ಶನ್ ಹೆಗ್ಡೆ , ಹಳೆ ವಿದ್ಯಾರ್ಥಿ ಯಾದ ಶಿವರಾಜ್ ಅಂಚನ್ , ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಶ್ರೀ ಧ ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ, ಪ್ರಧಾನ ಗುರುಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya
error: Content is protected !!