30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವವನ್ನು ಹರ್ಷೋಲ್ಲಾಸದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿರ್ಮಲ್ ಕುಮಾರ್ ಅವರು ಸ್ವಾತಂತ್ರ‍್ಯದ ಮಹತ್ವ ಹಾಗೂ ತ್ರಿವರ್ಣ ಧ್ವಜದ ಸಂಕೇತಾರ್ಥಗಳನ್ನು ಮನದಟ್ಟುಗೊಳಿಸಿದರು. ಅವರು, ಧ್ವಜದ ಪ್ರತಿಯೊಂದು ಬಣ್ಣವು ದೇಶದ ಏಕತೆ, ಶಾಂತಿ ಹಾಗೂ ಧೈರ್ಯವನ್ನು ಪ್ರತಿನಿಧಿಸುವುದಾಗಿ ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ ಶಾಂತಿವನ ಟ್ರಸ್ಟಿನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತಾಯ ಅವರು, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಸ್ವಾತಂತ್ರ‍್ಯಸೇನಾನಿಗಳ ತ್ಯಾಗ, ಶೌರ್ಯ ಹಾಗೂ ನಿಸ್ವಾರ್ಥ ಸೇವೆಯನ್ನು ಸ್ಮರಿಸಿದರು. “ಸ್ವಾತಂತ್ರ‍್ಯ ನಮಗೆ ದೊರಕಿದ್ದು ಅನೇಕ ಹೋರಾಟ, ಬಲಿದಾನ ಮತ್ತು ತ್ಯಾಗಗಳ ಫಲ” ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಸ್ವಾಗತ ಭಾಷಣವನ್ನು ಶಾಂತಿವನದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ ಅವರು ನೆರವೇರಿಸಿದರು.
ಶಾಂತಿವನದ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ. ಬಿಂದು ಧನ್ಯವಾದವಿತ್ತರು

ಈ ಸಂದರ್ಭದಲ್ಲಿ ಶಾಂತಿವನದ ಆಡಳಿತಾಧಿಕಾರಿ ಜಗನ್ನಾಥ್ , ಆಸ್ಪತ್ರೆಯ ವ್ಯವಸ್ಥಾಪಕ ಸ್ವಸ್ತಿಕ್ ಅವರು ಸಿಬ್ಬಂದಿವರ್ಗದವರು, ಸಾಧಕರು, ವೈದ್ಯರು, ವೈದ್ಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಾರ್ಯಕ್ರಮವು ದೇಶಭಕ್ತಿಯ ಹಾಡುಗಳು ಹಾಗೂ ಧ್ವಜಾರೋಹಣ ನೆರವೇರಿತು.

Related posts

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya
error: Content is protected !!