22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವವನ್ನು ಹರ್ಷೋಲ್ಲಾಸದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿರ್ಮಲ್ ಕುಮಾರ್ ಅವರು ಸ್ವಾತಂತ್ರ‍್ಯದ ಮಹತ್ವ ಹಾಗೂ ತ್ರಿವರ್ಣ ಧ್ವಜದ ಸಂಕೇತಾರ್ಥಗಳನ್ನು ಮನದಟ್ಟುಗೊಳಿಸಿದರು. ಅವರು, ಧ್ವಜದ ಪ್ರತಿಯೊಂದು ಬಣ್ಣವು ದೇಶದ ಏಕತೆ, ಶಾಂತಿ ಹಾಗೂ ಧೈರ್ಯವನ್ನು ಪ್ರತಿನಿಧಿಸುವುದಾಗಿ ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ ಶಾಂತಿವನ ಟ್ರಸ್ಟಿನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತಾಯ ಅವರು, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಸ್ವಾತಂತ್ರ‍್ಯಸೇನಾನಿಗಳ ತ್ಯಾಗ, ಶೌರ್ಯ ಹಾಗೂ ನಿಸ್ವಾರ್ಥ ಸೇವೆಯನ್ನು ಸ್ಮರಿಸಿದರು. “ಸ್ವಾತಂತ್ರ‍್ಯ ನಮಗೆ ದೊರಕಿದ್ದು ಅನೇಕ ಹೋರಾಟ, ಬಲಿದಾನ ಮತ್ತು ತ್ಯಾಗಗಳ ಫಲ” ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಸ್ವಾಗತ ಭಾಷಣವನ್ನು ಶಾಂತಿವನದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ ಅವರು ನೆರವೇರಿಸಿದರು.
ಶಾಂತಿವನದ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ. ಬಿಂದು ಧನ್ಯವಾದವಿತ್ತರು

ಈ ಸಂದರ್ಭದಲ್ಲಿ ಶಾಂತಿವನದ ಆಡಳಿತಾಧಿಕಾರಿ ಜಗನ್ನಾಥ್ , ಆಸ್ಪತ್ರೆಯ ವ್ಯವಸ್ಥಾಪಕ ಸ್ವಸ್ತಿಕ್ ಅವರು ಸಿಬ್ಬಂದಿವರ್ಗದವರು, ಸಾಧಕರು, ವೈದ್ಯರು, ವೈದ್ಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಾರ್ಯಕ್ರಮವು ದೇಶಭಕ್ತಿಯ ಹಾಡುಗಳು ಹಾಗೂ ಧ್ವಜಾರೋಹಣ ನೆರವೇರಿತು.

Related posts

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
error: Content is protected !!