September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

ಪರೀಕ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ದೇಶದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯವೈದ್ಯಾಧಿಕಾರಿ ಡಾ| ಗೋಪಾಲ ಪೂಜಾರಿ ಧ್ವಜಾರೋಹಣವನ್ನು ನೆರವೇರಿಸಿ ಶುಭ ಸಂದೇಶದಲ್ಲಿ ಪ್ರಸ್ತುತ ಭಾರತವು ಆನೇಕ ವಿಚಾರಗಳಲ್ಲಿ ಮುಂದುವರಿದ ರಾಷ್ಟ್ರವಾಗಿ ಮುಂದುವರಿದಿದ್ದು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಅನೇಕ ಮಂದಿ ತಮ್ಮ ಬಲಿದಾನವನ್ನು ಮಾಡಿದ್ದು ಆ ಮಹಾತ್ಮರ ನೆನಪನ್ನು ನಾವು ಈ ಸಂದರ್ಭದಲ್ಲಿ ಮಾಡುವುದು ಸೂಕ್ತ ಎಂದು ತಿಳಿಸಿದರು.ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ದೂರದೃಷ್ಠಿಯಿಂದ ಸ್ಥಾಪನೆ ಮಾಡಿದ ಪ್ರಕೃತಿ ಚಿಕಿತ್ಸಾ ಕೇಂದ್ರಗಳು ದೇಶ ವಿದೇಶದಲ್ಲಿ ಪ್ರಖ್ಯಾತಿಯನ್ನು ಪಡೆದು ಔಷಧಿ ರಹಿತ ಚಿಕಿತ್ಸಾ ಪದ್ದತಿಯಾದ ಇದಕ್ಕೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕೂಡ ತನ್ನ ಒಲವು ಹಾಗೂ ಬದ್ದತೆಯನ್ನು ವ್ಯಕ್ತ ಪಡಿಸಿದ್ದರು ಎಂದು ತಿಳಿಸಿದರು.


ಸಾಧಕರಾಗಿ ಅತಿಥಿ ಸ್ಥಾನದಿಂದ ಉಪಸ್ಥಿತರಿದ್ದ ದಿನೇಶ್ ಮೈಸೂರು ರವರು ಶುಭ ಹಾರೈಸಿ ಸೌಖ್ಯವನದ ಬಗ್ಗೆ ತನ್ನ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು.ಡಾ ಶೋಭಿತ್ ಶೆಟ್ಟಿ ಹಾಗೂ ಡಾ ಪೂಜಾ ಜಿ ರವರು ತಮ್ಮ ಅನಿಸಿಕೆಗಳ ಮಾತುಗಳನ್ನಾಡಿದರು.
ಸೌಖ್ಯವನದ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವನ್ನಿತ್ತರು.

Related posts

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!