September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಪುಂಜಾಲಕಟ್ಟೆ: ನಮಗೆಲ್ಲರಿಗೂ ಸ್ವಾತಂತ್ರ ದೊರಕಿ 78 ವರ್ಷಗಳು ಆಗಿದೆ. ಇಂದು 79ನೇ ವರ್ಷದ ಸಂಭ್ರಮದಲ್ಲಿ ನಾವೆಲ್ಲರೂ ಪಾಲ್ಗೊಂಡಿದ್ದೇವೆ. ಪ್ರತಿಯೊಬ್ಬರೂ ಕೂಡ ಈ ಒಂದು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಂತಹ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕಾದದ್ದು ಸರ್ವ ಭಾರತೀಯರ ಮೊದಲ ಕರ್ತವ್ಯ. ನಮಗೆ ಸ್ವಾತಂತ್ರ್ಯವನ್ನು ತಂದು ಕೊಡುವಲ್ಲಿ ಬಲಿದಾನಗೈದ ಆ ಮಹಾತ್ಮರನ್ನು ಸದಾ ಸ್ಮರಿಸೋಣ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ತನ್ನ ಪಾಲಿನ ಕರ್ತವ್ಯವನ್ನು ಮಾಡುತ್ತಾ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಬಿ ಉದಯಕುಮಾರ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಅವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ನೆರವೇರಿಸಿದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.


ಕಾರ್ಯಕ್ರಮವು ಎನ್ ಸಿ ಸಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಹಾಗೂ ಭಾರತಮಾತೆಗೆ ಗೌರವ ಸಲ್ಲಿಸಲಾಯಿತು. ಸಮಾರಂಭದಲ್ಲಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಳಗ, ಪ್ರೌಢಶಾಲಾ ವಿಭಾಗದ ಶಿಕ್ಷಕ ಹಾಗೂ ಶಿಕ್ಷಕೇತರ ಬಳಗ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಪೋಷಕ ಬಂಧುಗಳ ಸಹಕಾರದೊಂದಿಗೆ ನೆರವೇರಿತು.
ಏನ್ ಸಿಸಿ ಅಧಿಕಾರಿ ವಿಜ್ಞಾನ ಶಿಕ್ಷಕ ನಿರಂಜನ್ ಜೈನ್ ಐ ಸ್ವಾಗತಿಸಿ, ಧರಣೇಂದ್ರ ಕೆ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya
error: Content is protected !!