30.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ ಅರಣ್ಯ ಉಪವಿಭಾಗ ಹಾಗೂ ಉಪ್ಪಿನಂಗಡಿ ಅರಣ್ಯ ವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹಾಗೂ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜ ಅವರು ಆ.15 ರಂದು ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಕಳೆದ ಜುಲೈ ತಿಂಗಳಲ್ಲಿ ಕೊಕ್ಕಡದ ಸೌತಡ್ಕದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ, ಅವರ ಪತ್ನಿ ಸುಜಾತ ಅವರಿಗೆ 20 ಲಕ್ಷ ರೂ., ಬೆಳೆ ನಾಶ ಮಲವಂತಿಗೆ ಗ್ರಾಮದ ವಸಂತಿ ರೂ.81 ಸಾವಿರ, ಚಾರ್ಮಾಡಿ ಗ್ರಾಮದ ಕುಂಞ ಮಲೆಕುಡಿಯ ಅವರಿಗೆ 1.6, ಲಕ್ಷ ರೂ., ಧರ್ಮಸ್ಥಳ ಗ್ರಾಮದ ಬೋಳಿಯರು ಎಂಬಲ್ಲಿ ಆನೆ ದಾಳಿಯಿಂದ ಆಟೋ ರಿಕ್ಷಾ ನಜ್ಜುಗುಜ್ಜು ಗೊಂಡು ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಅವರಿಗೆ ರೂ.20 ಸಾವಿರ ವಿತರಿಸಲಾಯಿತು.

ಈ ವೇಳೆ ಪುತ್ತೂರು ಉಪ ವಿಭಾಗ ಎಸಿಎಫ್ ಸುಬ್ಬಯ್ಯ ನಾಯ್ಕ್, ಮಂಗಳೂರು ಉಪ ವಿಭಾಗ ಎಸಿಎಫ್ ಶಿವಾನಂದ್ ವಿಭೂತೆ, ಉಪ್ಪಿನಂಗಡಿ ಆರ್.ಎಫ್.ಒ ರಾಘವೇಂದ್ರ ಹಾಗೂ ಬೆಳ್ತಂಗಡಿ ಆರ್.ಎಫ್.ಒ. ತ್ಯಾಗರಾಜ್ ಟಿ.ಎನ್. ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!