July 23, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ ಅರಣ್ಯ ಉಪವಿಭಾಗ ಹಾಗೂ ಉಪ್ಪಿನಂಗಡಿ ಅರಣ್ಯ ವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹಾಗೂ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜ ಅವರು ಆ.15 ರಂದು ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಕಳೆದ ಜುಲೈ ತಿಂಗಳಲ್ಲಿ ಕೊಕ್ಕಡದ ಸೌತಡ್ಕದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ, ಅವರ ಪತ್ನಿ ಸುಜಾತ ಅವರಿಗೆ 20 ಲಕ್ಷ ರೂ., ಬೆಳೆ ನಾಶ ಮಲವಂತಿಗೆ ಗ್ರಾಮದ ವಸಂತಿ ರೂ.81 ಸಾವಿರ, ಚಾರ್ಮಾಡಿ ಗ್ರಾಮದ ಕುಂಞ ಮಲೆಕುಡಿಯ ಅವರಿಗೆ 1.6, ಲಕ್ಷ ರೂ., ಧರ್ಮಸ್ಥಳ ಗ್ರಾಮದ ಬೋಳಿಯರು ಎಂಬಲ್ಲಿ ಆನೆ ದಾಳಿಯಿಂದ ಆಟೋ ರಿಕ್ಷಾ ನಜ್ಜುಗುಜ್ಜು ಗೊಂಡು ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಅವರಿಗೆ ರೂ.20 ಸಾವಿರ ವಿತರಿಸಲಾಯಿತು.

ಈ ವೇಳೆ ಪುತ್ತೂರು ಉಪ ವಿಭಾಗ ಎಸಿಎಫ್ ಸುಬ್ಬಯ್ಯ ನಾಯ್ಕ್, ಮಂಗಳೂರು ಉಪ ವಿಭಾಗ ಎಸಿಎಫ್ ಶಿವಾನಂದ್ ವಿಭೂತೆ, ಉಪ್ಪಿನಂಗಡಿ ಆರ್.ಎಫ್.ಒ ರಾಘವೇಂದ್ರ ಹಾಗೂ ಬೆಳ್ತಂಗಡಿ ಆರ್.ಎಫ್.ಒ. ತ್ಯಾಗರಾಜ್ ಟಿ.ಎನ್. ಉಪಸ್ಥಿತರಿದ್ದರು.

Related posts

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya
error: Content is protected !!