25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ಧ್ವಜ ಗೀತೆ ವೇಳೆ ಮಳೆ ಸುರಿದರೂ ಅತಿಥಿಗಳು, ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಎಂಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಹಾಗೂ ವಿದ್ಯಾರ್ಥಿಗಳು ನಿಂತಲ್ಲೇ ನಿಂತು ಮಳೆಗೂ ಒದ್ದೆಯಾದರೂ ಲೆಕ್ಕಿಸದೆ ರಾಷ್ಟ್ರ ಪ್ರೇಮ ಮೆರೆದು ಧ್ವಜಕ್ಕೆ ಗೌರವ ಸೂಚಿಸಿದ್ದು ಗಮನ ಸೆಳೆಯಿತು. ಮಳೆಗೂ ವಿದ್ಯಾರ್ಥಿಗಳು ಘೋಷಣೆ ಕೂಗಿದರೂ.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕುಶಾಲಪ್ಪ ಎಸ್. ಪ್ರಧಾನ ಭಾಷಣ ಮಾಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ಸ್ ಆ್ಯಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಮೂಲಕ ಆಕರ್ಷಕ ಪಥ ಸಂಚಲನ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ರಾಜೇಶ್ ನಿರೂಪಿಸಿದರು.

Related posts

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ: ದಿ. ಪ್ರೊ. ಎಸ್. ಪ್ರಭಾಕರ್ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya
error: Content is protected !!