ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜ್ಯೋತಿ ಎನ್.ಎಸ್.ನೆರವೇರಿಸಿದರು.

ಬಳಿಕ ನಡೆದ ಸಮಾರಂಭದಲ್ಲಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದ ಅವರು , ‘ ಭವ್ಯ ಭಾರತದಲ್ಲಿ ಬದುಕುವುದೇ ನಮ್ಮೆಲ್ಲರ ಪಾಲಿನ ಸೌಭಾಗ್ಯ. ನಮ್ಮ ಪಾರಂಪರಿಕ ಸಂಸ್ಕೃತಿ, ಭಾಷಾ ವೈವಿಧ್ಯತೆಯ ಮಧ್ಯೆ ಶಿಕ್ಷಣ ಹಾಗೂ ಆರ್ಥಿಕತೆಯಲ್ಲಿ ಈ ದೇಶವನ್ನು ಸಂಪದ್ಭರಿತವಾಗಿ ಕಟ್ಟುವ ಕಾರ್ಯದಲ್ಲಿ ಎಲ್ಲರೂ ಶಕ್ತಿ ಮೀರಿ ಪಣ ತೊಡಬೇಕು ‘ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ವಹಿಸಿದ್ದರು

ನಿವೃತ್ತ ಶಿಕ್ಷಕ ಸುರೇಶ್, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ವಿದ್ಯಾರ್ಥಿಗಳಾದ ತೃತೀಯ ಬಿ. ಎ. ವಿದ್ಯಾರ್ಥಿನಿ ಚಂದನಾ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಖುಷಿ, ವಿಜ್ಞಾನ ವಿಭಾಗದ ವಿದ್ಯಾರ್ಥಿ ದೀಪಕ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ನಡೆಯಿತು

ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ಪರಿಚಯಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸೌಮ್ಯ, ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ಬಹುಮಾನಿತರ ಪಟ್ಟಿ ವಾಚಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಷ್ಮಾ ಹಾಗೂ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಸತೀಶ್ ಸಿ ವಂದಿಸಿದರು.

Related posts

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya
error: Content is protected !!