25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್ ಮುಂದುಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.


ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!