July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್ ಮುಂದುಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.


ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya
error: Content is protected !!