July 23, 2026
ಚಿತ್ರ ವರದಿವರದಿ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ಹೊಕ್ಕಡಿಗೋಳಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾತ್ ಅಧ್ಯಕ್ಷರಾದ ಹೆಚ್ ಕೆ ಮುಹಮ್ಮದ್ ಶರೀಫ್ ರವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಮಾತ್ ಕಾರ್ಯದರ್ಶಿ ಫಾರೂಕ್ ಹೊಕ್ಕಾಡಿಗೋಳಿ ಸ್ವಾಗತ ಭಾಷಣ ಮಾಡಿದರು. ಮಸೀದಿ ಖದೀಬರಾದ ಮುಹಮ್ಮದ್ ನಿಯಾಝ್ ಫೈಝಿ ದುಹಾದೊಂದಿಗೆ ಸ್ವಾತಂತ್ರದ ಬಗ್ಗೆ ಶುಭ ಸಂದೇಶ ನೀಡಿದರು. ಗೌರವಧ್ಯಕ್ಷ ಹೆಚ್ ಮಹಮ್ಮದ್ ಇಕ್ಬಾಲ್ ಸ್ವಾತಂತ್ರ್ಯಹೋರಾಟದ ಬಗ್ಗೆ ವಿವರಿಸಿದರು. ಮದರಸ ಮಕ್ಕಳು ಹಾಗೂ ಜಮಾತ್ ಬಾಂಧವರಿಗೆ ಮಸೀದಿ ವಿದ್ಯಾರ್ಥಿ ರಿಹಾನ್ ಅಹಮದ್ ಭಾವ ಸ್ವಾತಂತ್ರ್ಯದ ಹಾಡು ಹಾಡಿದರು.

ಈ ಕಾರ್ಯಕ್ರಮದಲ್ಲಿ ಸಿರಾಜುಲ್ ಹುದಾ ಯಂಗ್ ಮೆನ್ಸ್ ಅಧ್ಯಕ್ಷ ಹೆಚ್ ಕೆ ಲತೀಫ್, ಆಡಳಿತ ಕಮಿಟಿ ಸದಸ್ಯರು, ಯಂಗ್ ಮೆನ್ಸ್ ಸದಸ್ಯರು, ಜಮಾತ್ ಬಾಂಧವರು ಮತ್ತು ಮದ್ರಸ ಮಕ್ಕಳು ಉಪಸ್ಥಿತರಿದ್ದರು. ಸಿರಜುಲ್ ಹುದಾ ಯಂಗ್ ಮೆನ್ಸ್ ಕಾರ್ಯದರ್ಶಿ ಎಚ್ ಐ ರಫೀಕ್ ಧನ್ಯವಾದ ಸಮರ್ಪಿಸಿದರು. ರಾಷ್ಟ್ರ ಗೀತೆ ಹಾಡಿ ಸಿಹಿ ತಿಂಡಿ ವಿತರಣೆ ಮಾಡಿದ ನಂತರ ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Related posts

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya
error: Content is protected !!