ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯೋತ್ಸವವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೋರವರ ಅಧ್ಯಕ್ಷತೆಯಲ್ಲಿ ಜರಗಿತು.
ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ವಿದ್ಯಾರ್ಥಿಗಳು ಶಾಲಾ ಜೀವನದಲ್ಲಿ ದೇಶ ಪ್ರೇಮವನ್ನು ಬೆಳೆಸಿಕೊಳ್ಳಲು ಕರೆಯಿತ್ತರು. ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆ್ಯಂಟನಿ ಫೆರ್ನಂಡೀಸ್, ಕಾರ್ಯದರ್ಶಿ ಲಿಗೋರಿ ವಾಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗುರುರಾಜ್ ಶಬರಾಯ, ಆಡಳಿತ ಮಂಡಳಿ ಸದಸ್ಯರು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆಯನ್ನಿತ ಹೆರಾಲ್ಡ್ ಪಿಂಟೊ ಹಾಗೂ ಇತ್ತಿಚೆಗೆ ಶಿವಮೊಗ್ಗದಲ್ಲಿ ನಡೆದ 6ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2025 ರಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿ ಮೊಹಮ್ಮದ್ ರಯ್ಯಾನ್ ರವರನ್ನು ಸನ್ಮಾನಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ರಾಷ್ಟ್ರ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸಹಶಿಕ್ಷಕ ಗಣೇಶ್ ನಿರೂಪಿಸಿ ವಂದಿಸಿದರು.











