September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯೋತ್ಸವವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೋರವರ ಅಧ್ಯಕ್ಷತೆಯಲ್ಲಿ ಜರಗಿತು.

ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ವಿದ್ಯಾರ್ಥಿಗಳು ಶಾಲಾ ಜೀವನದಲ್ಲಿ ದೇಶ ಪ್ರೇಮವನ್ನು ಬೆಳೆಸಿಕೊಳ್ಳಲು ಕರೆಯಿತ್ತರು. ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆ್ಯಂಟನಿ ಫೆರ್ನಂಡೀಸ್, ಕಾರ್ಯದರ್ಶಿ ಲಿಗೋರಿ ವಾಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗುರುರಾಜ್ ಶಬರಾಯ, ಆಡಳಿತ ಮಂಡಳಿ ಸದಸ್ಯರು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆಯನ್ನಿತ ಹೆರಾಲ್ಡ್ ಪಿಂಟೊ ಹಾಗೂ ಇತ್ತಿಚೆಗೆ ಶಿವಮೊಗ್ಗದಲ್ಲಿ ನಡೆದ 6ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2025 ರಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿ ಮೊಹಮ್ಮದ್ ರಯ್ಯಾನ್ ರವರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ರಾಷ್ಟ್ರ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸಹಶಿಕ್ಷಕ ಗಣೇಶ್ ನಿರೂಪಿಸಿ ವಂದಿಸಿದರು.

Related posts

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya
error: Content is protected !!