25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya
error: Content is protected !!