July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya
error: Content is protected !!