September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ತುಳು ಸಂಸ್ಕೃತಿ ಕುರಿತ ಕಾರ್ಯಕ್ರಮ ‘ಆಟಿಡೊಂಜಿ ದಿನ’ ಆ.13ರಂದು ನಡೆಯಿತು.

ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಅವರು ದೀಪ ಬೆಳಗಿ, ಹಿಂಗಾರ ಅರಳಿಸಿ, ಚೆನ್ನೆಮಣೆ ಆಡುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಆಟಿ ತಿಂಗಳ ಮಹತ್ವ, ತಿಂಡಿ ತಿನಿಸು, ಆರೋಗ್ಯದ ಹಿನ್ನೆಲೆ ಇರುವ ಪದಾರ್ಥಗಳು ಹಾಗೂ ಆಟಿ ಅಮಾವಾಸ್ಯೆ ಬಗ್ಗೆ ತಿಳಿಸಿದರು.

ತುಳು ಭಾಷಾ ಶಿಕ್ಷಕಿ ತ್ರಿವೇಣಿ ಅವರು ಆಟಿ ತಿಂಗಳಿನಲ್ಲಿ ನಡೆಯುವ ದೈವಾರಾಧನೆ, ನಾಗಾರಾಧನೆ ಬಗ್ಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ಸುರೇಶ್ ಕೆ. ಅವರು ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ತುಳು ಜಾನಪದ ನೃತ್ಯ, ಕವಿತೆ ಮುಂತಾದ ಮನೋರಂಜನೆ ಕಾರ್ಯಕ್ರಮ ನೀಡಿದರು.

ವಿದ್ಯಾರ್ಥಿಗಳಾದ ನಿಶ್ಮಿತ್, ಸ್ವಾಗತಿಸಿ, ರಕ್ಷಿತಾ ವಂದಿಸಿ, ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya
error: Content is protected !!