22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ತುಳು ಸಂಸ್ಕೃತಿ ಕುರಿತ ಕಾರ್ಯಕ್ರಮ ‘ಆಟಿಡೊಂಜಿ ದಿನ’ ಆ.13ರಂದು ನಡೆಯಿತು.

ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಅವರು ದೀಪ ಬೆಳಗಿ, ಹಿಂಗಾರ ಅರಳಿಸಿ, ಚೆನ್ನೆಮಣೆ ಆಡುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಆಟಿ ತಿಂಗಳ ಮಹತ್ವ, ತಿಂಡಿ ತಿನಿಸು, ಆರೋಗ್ಯದ ಹಿನ್ನೆಲೆ ಇರುವ ಪದಾರ್ಥಗಳು ಹಾಗೂ ಆಟಿ ಅಮಾವಾಸ್ಯೆ ಬಗ್ಗೆ ತಿಳಿಸಿದರು.

ತುಳು ಭಾಷಾ ಶಿಕ್ಷಕಿ ತ್ರಿವೇಣಿ ಅವರು ಆಟಿ ತಿಂಗಳಿನಲ್ಲಿ ನಡೆಯುವ ದೈವಾರಾಧನೆ, ನಾಗಾರಾಧನೆ ಬಗ್ಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ಸುರೇಶ್ ಕೆ. ಅವರು ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ತುಳು ಜಾನಪದ ನೃತ್ಯ, ಕವಿತೆ ಮುಂತಾದ ಮನೋರಂಜನೆ ಕಾರ್ಯಕ್ರಮ ನೀಡಿದರು.

ವಿದ್ಯಾರ್ಥಿಗಳಾದ ನಿಶ್ಮಿತ್, ಸ್ವಾಗತಿಸಿ, ರಕ್ಷಿತಾ ವಂದಿಸಿ, ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya
error: Content is protected !!