22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕನ್ಯಾಡಿ : 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಎಸ್‌.ಡಿ.ಎಂ.ಸಿ.ಯ ಅಧ್ಯಕ್ಷ ಕೆ. ನಂದ ಇವರ ಉಪಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀಮತಿ ಪವಿತ್ರ ಸುಕುಮಾರ ಶೆಟ್ಟಿ, ಬೃಂದಾವನ ಮನೆ ಕನ್ಯಾಡಿ 2, ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಶುಭ ಮಾತುಗಳನ್ನಾಡಿದರು.

ಮಹಾತ್ಮ ಗಾಂಧೀಜಿ ಮತ್ತು ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಗೌರವವನ್ನು ಸೂಚಿಸಲಾಯಿತು. ಶಾಲಾ ನಾಯಕಿ ಕುಮಾರಿ ಅನನ್ಯ ನೇತೃತ್ವದಲ್ಲಿ ಘೋಷಣೆಯನ್ನು ಮಕ್ಕಳು ಹೇಳುವ ಮೂಲಕ ಹುತಾತ್ಮರಿಗೆ ಗೌರವವನ್ನು ಸಲ್ಲಿಸಲಾಯಿತು ಮತ್ತು ಕುಮಾರಿ ಸಂಜನಾ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದಳು.

ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ, ಪ್ರಭಾಕರ್ ಗೌಡ ಬೊಳ್ಮಾ , ಸಿ.ಜೆ.ಪ್ರಭಾಕರ್, ಸೂರ್ಯಪ್ರಕಾಶ್ ಎಂ , ನೀಲಕಂಠ ಶೆಟ್ಟಿ , ನವೀನ್ ಚಂದ್ರ ಶೆಟ್ಟಿ, ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವನಜಾ ಕುಮಾರಿ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್, ಎಸ್ ಡಿ .ಎಮ್. ಸಿ ಯ ಸದಸ್ಯರು ಉಪಸ್ಥಿತರಿದ್ದರು. ಮಕ್ಕಳ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮವು ಸಡಗರದಿಂದ ನೆರವೇರಿತು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು, ಪೋಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಸ್ವಾಗತವನ್ನು ಶ್ರೀಮತಿ ಪುಷ್ಪಾ ಎನ್, ಧನ್ಯವಾದ ಸಹ ಶಿಕ್ಷಕರಾದ ನಾಗರಾಜ್ ಮತ್ತು ಸಹ ಶಿಕ್ಷಕರಾದ ಶ್ರೀಮತಿ ದೀಪಿಕಾ ಕಾರ್ಯಕ್ರಮವನ್ನು ನಿರೂಪಿಸಿದರು. ಮಕ್ಕಳಿಗೆ ಸಿಹಿ ತಿಂಡಿ ಮತ್ತು ಮಧ್ಯಾಹ್ನದ ಊಟವನ್ನು ನೀಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Related posts

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya
error: Content is protected !!