22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ: ಕಿಲ್ಲೂರು ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಬಹಳ ವಿಜೃಂಬಣೆಯಿಂದ 79 ನೇ ಸ್ವಾತಂತ್ರ ದಿನಾಚರಣೆಯನ್ನು ಜಮಾಅತ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು ಇವರ ನೇತೃತ್ವದಲ್ಲಿ ನಡೆಯಿತು.

ಜಮಾಅತ್ ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆ ಮನೆ ಧ್ವಜಾರೋಹಣ ಕಾರ್ಯಕ್ರಮವನ್ನು ನಿರ್ವಹಿಸಿದರು.ಜಮಾಅತ್ ಧರ್ಮ ಗುರುಗಳಾದ ಅಲ್ ಹಾಜ್ ಅಬ್ದುರಹ್ಮಾನ್ ಬಾಖವಿ ಕಕ್ಕಿಂಜೆ ಕಾರ್ಯಕ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ಮುಖ್ಯೋಪಾಧ್ಯಾಯರಾದ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ಸ್ವಾತಂತ್ರದ ಸಂದೇಶ ಭಾಷಣ ಮಾಡಿದರು. ಇರ್ಷಾದುಶ್ಶಿಬಿಯಾನ್ ಮದರಸ ವಿದ್ಯಾರ್ಥಿಗಳಿಂದ ದೇಶ ಭಕ್ತಿಗೀತೆ, ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಿತು.

ವಿಜೇತರಿಗೆ ಆಡಳಿತ ಕಮೀಟಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಜಮಾಅತ್ ಉಪಾಧ್ಯಕ್ಷ ಹಮೀದ್ ಅಮ್ಮಿ ಜಮಾಅತ್ ಕಾರ್ಯದರ್ಶಿ ಹಂಝತ್ ಕಿಲ್ಲೂರು , ಸದಸ್ಯರಾದ ಮಹಮ್ಮದ್ ಪುತ್ತುಮೋನು ಶ್ರವಣಗುಂಡ ,ಬದ್ರುದ್ದೀನ್ ಕಿಲ್ಲೂರು, ಮಹಮ್ಮದ್ ಮಣ್ಣಗುಂಡಿ , ಅಶ್ರಫ್ ಶ್ರವಣಗುಂಡ, ಮಾಜಿ ಖತೀಬರಾದ ಮುಹಮ್ಮದ್ ಉಸ್ತಾದ್ ಹಾಗೂ ಜಮಾಅತ್ ಗೆ ಒಳಪಟ್ಟ ಮಕ್ಕಳ ಪೋಷಕರು, ಊರಿನ ಹಿರಿಯರು ಉಪಸ್ಥಿತರಿದ್ದರು.

ಮದರಸ ವಿದ್ಯಾರ್ಥಿಗಳಿಗೆ ಯುವ ಉದ್ಯಮಿ ಕೊಡುಗೈ ದಾನಿ ಅಶ್ರಫ್ ತಿಮ್ಮನಬೆಟ್ಟು ರವರಿಂದ ಕುಡಿಯಲು ಪಾನೀಯ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು. ಅಧ್ಯಾಪಕ ಅಬೂಬಕ್ಕರ್ ಮುಸ್ಲಿಯಾರ್ ಸ್ವಾಗತಿಸಿ ಧನ್ಯವಾದಗೈದರು.

Related posts

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!