24 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ: ಕಿಲ್ಲೂರು ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಬಹಳ ವಿಜೃಂಬಣೆಯಿಂದ 79 ನೇ ಸ್ವಾತಂತ್ರ ದಿನಾಚರಣೆಯನ್ನು ಜಮಾಅತ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು ಇವರ ನೇತೃತ್ವದಲ್ಲಿ ನಡೆಯಿತು.

ಜಮಾಅತ್ ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆ ಮನೆ ಧ್ವಜಾರೋಹಣ ಕಾರ್ಯಕ್ರಮವನ್ನು ನಿರ್ವಹಿಸಿದರು.ಜಮಾಅತ್ ಧರ್ಮ ಗುರುಗಳಾದ ಅಲ್ ಹಾಜ್ ಅಬ್ದುರಹ್ಮಾನ್ ಬಾಖವಿ ಕಕ್ಕಿಂಜೆ ಕಾರ್ಯಕ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ಮುಖ್ಯೋಪಾಧ್ಯಾಯರಾದ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ಸ್ವಾತಂತ್ರದ ಸಂದೇಶ ಭಾಷಣ ಮಾಡಿದರು. ಇರ್ಷಾದುಶ್ಶಿಬಿಯಾನ್ ಮದರಸ ವಿದ್ಯಾರ್ಥಿಗಳಿಂದ ದೇಶ ಭಕ್ತಿಗೀತೆ, ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಿತು.

ವಿಜೇತರಿಗೆ ಆಡಳಿತ ಕಮೀಟಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಜಮಾಅತ್ ಉಪಾಧ್ಯಕ್ಷ ಹಮೀದ್ ಅಮ್ಮಿ ಜಮಾಅತ್ ಕಾರ್ಯದರ್ಶಿ ಹಂಝತ್ ಕಿಲ್ಲೂರು , ಸದಸ್ಯರಾದ ಮಹಮ್ಮದ್ ಪುತ್ತುಮೋನು ಶ್ರವಣಗುಂಡ ,ಬದ್ರುದ್ದೀನ್ ಕಿಲ್ಲೂರು, ಮಹಮ್ಮದ್ ಮಣ್ಣಗುಂಡಿ , ಅಶ್ರಫ್ ಶ್ರವಣಗುಂಡ, ಮಾಜಿ ಖತೀಬರಾದ ಮುಹಮ್ಮದ್ ಉಸ್ತಾದ್ ಹಾಗೂ ಜಮಾಅತ್ ಗೆ ಒಳಪಟ್ಟ ಮಕ್ಕಳ ಪೋಷಕರು, ಊರಿನ ಹಿರಿಯರು ಉಪಸ್ಥಿತರಿದ್ದರು.

ಮದರಸ ವಿದ್ಯಾರ್ಥಿಗಳಿಗೆ ಯುವ ಉದ್ಯಮಿ ಕೊಡುಗೈ ದಾನಿ ಅಶ್ರಫ್ ತಿಮ್ಮನಬೆಟ್ಟು ರವರಿಂದ ಕುಡಿಯಲು ಪಾನೀಯ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು. ಅಧ್ಯಾಪಕ ಅಬೂಬಕ್ಕರ್ ಮುಸ್ಲಿಯಾರ್ ಸ್ವಾಗತಿಸಿ ಧನ್ಯವಾದಗೈದರು.

Related posts

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya
error: Content is protected !!