22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ: ಆ.15. ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ 25 ನೇ ವರ್ಷವನ್ನು ಸಂಭ್ರಮದಿಂದ ಆಚರಿಸಲಾಯಿತು.
ಗೇರುಕಟ್ಟೆ ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಕೆ.
ಧ್ವಜಾರೋಹಣ ಮಾಡಿದರು.


ಸಂಘದ 25 ನೇ ವರ್ಷ ಪೂರೈಸಿದ ನೆನಪಿಗಾಗಿ ಗೇರುಕಟ್ಟೆ ಕೊರಂಜ ಸ.ಉ.ಹಿ.ಪ್ರಾ.ಶಾಲೆ ಹಾಗೂ ಗೇರುಕಟ್ಟೆ ಸರಕಾರಿ ಸಂಯುಕ್ತ ಫ್ರೌಡ ಶಾಲೆಗಳಿಗೆ ಆಫೀಸ್ ಟೇಬಲ್ ಮುಖ್ಯ ಶಿಕ್ಷಕರಿಗೆ ಹಸ್ತಾಂತರ ಮಾಡಿದರು.
ಸ್ಥಳೀಯ ಉದ್ಯಮಿ ಮನ್ಸೂರ್ ಗೇರುಕಟ್ಟೆ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಸಂದರ್ಭೋಚಿತವಾಗಿ ಮಾತನಾಡಿದರು.ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಂ, ಯಶೋಧರ ಶೆಟ್ಟಿ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ,ನಾಳ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶರತ್ ಕುಮಾರ್ ಕೆ.,ಗೇರುಕಟ್ಟೆ ಫ್ರೌಡ ಶಾಲಾ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಗೌಡ ಯಂ.ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ನಾಸಿರ್, ಕಾರ್ಯದರ್ಶಿ ಮೈಕೆಲ್ ಮೊಂತೇರೊ,ಜತೆ ಕಾರ್ಯದರ್ಶಿ ವಿನಯ,ಕೋಶಾಧಿಕಾರಿ ತಾರಾನಾಥ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಧ್ವಜರೋಹಣ ಸಂದರ್ಭದಲ್ಲಿ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಫ್ರೌಡ ಶಾಲೆ ಹಾಗೂ ಮನ್ಷ್ಯ ರ್ ಶಾಲಾ ಮಕ್ಕಳು ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಪೋಷಕರು
ಉಪಸ್ಥಿತರಿದ್ದರು. ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೆಚ್. ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಘದ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪದ್ಮನಾಭ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya
error: Content is protected !!