September 6, 2026
ವರದಿ

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ: ಆ.15. ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ 25 ನೇ ವರ್ಷವನ್ನು ಸಂಭ್ರಮದಿಂದ ಆಚರಿಸಲಾಯಿತು.
ಗೇರುಕಟ್ಟೆ ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಕೆ.
ಧ್ವಜಾರೋಹಣ ಮಾಡಿದರು.


ಸಂಘದ 25 ನೇ ವರ್ಷ ಪೂರೈಸಿದ ನೆನಪಿಗಾಗಿ ಗೇರುಕಟ್ಟೆ ಕೊರಂಜ ಸ.ಉ.ಹಿ.ಪ್ರಾ.ಶಾಲೆ ಹಾಗೂ ಗೇರುಕಟ್ಟೆ ಸರಕಾರಿ ಸಂಯುಕ್ತ ಫ್ರೌಡ ಶಾಲೆಗಳಿಗೆ ಆಫೀಸ್ ಟೇಬಲ್ ಮುಖ್ಯ ಶಿಕ್ಷಕರಿಗೆ ಹಸ್ತಾಂತರ ಮಾಡಿದರು.
ಸ್ಥಳೀಯ ಉದ್ಯಮಿ ಮನ್ಸೂರ್ ಗೇರುಕಟ್ಟೆ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಸಂದರ್ಭೋಚಿತವಾಗಿ ಮಾತನಾಡಿದರು.ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಂ, ಯಶೋಧರ ಶೆಟ್ಟಿ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ,ನಾಳ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶರತ್ ಕುಮಾರ್ ಕೆ.,ಗೇರುಕಟ್ಟೆ ಫ್ರೌಡ ಶಾಲಾ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಗೌಡ ಯಂ.ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ನಾಸಿರ್, ಕಾರ್ಯದರ್ಶಿ ಮೈಕೆಲ್ ಮೊಂತೇರೊ,ಜತೆ ಕಾರ್ಯದರ್ಶಿ ವಿನಯ,ಕೋಶಾಧಿಕಾರಿ ತಾರಾನಾಥ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಧ್ವಜರೋಹಣ ಸಂದರ್ಭದಲ್ಲಿ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಫ್ರೌಡ ಶಾಲೆ ಹಾಗೂ ಮನ್ಷ್ಯ ರ್ ಶಾಲಾ ಮಕ್ಕಳು ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಪೋಷಕರು
ಉಪಸ್ಥಿತರಿದ್ದರು. ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೆಚ್. ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಘದ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪದ್ಮನಾಭ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!