38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಭಾರತ ಮಾತಾ ಪೂಜನದೊಂದಿಗೆ ಯೋಗ ಬಂಧುಗಳು ಆಚರಿಸಿದರು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸತೀಶ್ ನಾಳ ನಿತ್ಯದ ಯೋಗ ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ಮತ್ತು ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಸದಾ ನಿರತರಾದ ಯೋಧರನ್ನು ಸ್ಮರಿಸಿ ಗೌರವಿಸುವುದು, ದೇಶದ ಐಕ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಗ ಕೇಂದ್ರದ ವರದಿ ಪ್ರಮುಖ ಕೇಶವ,ಸಂಚಾಲಕ ವಿಜಯ, ಸಹ ಶಿಕ್ಷಕ ಸುಕೇಶ, ಅಶೋಕ, ವಸಂತ, ದಿವಾಕರ, ಗಣೇಶ, ಪದ್ಮಲತಾ, ಅರುಣ, ಭಾರತಿಯವರು ಭಾರತ ಮಾತಾ ಪೂಜನದಲ್ಲಿ ಭಾಗವಹಿಸಿದರು.

Related posts

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya
error: Content is protected !!