22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಭಾರತ ಮಾತಾ ಪೂಜನದೊಂದಿಗೆ ಯೋಗ ಬಂಧುಗಳು ಆಚರಿಸಿದರು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸತೀಶ್ ನಾಳ ನಿತ್ಯದ ಯೋಗ ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ಮತ್ತು ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಸದಾ ನಿರತರಾದ ಯೋಧರನ್ನು ಸ್ಮರಿಸಿ ಗೌರವಿಸುವುದು, ದೇಶದ ಐಕ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಗ ಕೇಂದ್ರದ ವರದಿ ಪ್ರಮುಖ ಕೇಶವ,ಸಂಚಾಲಕ ವಿಜಯ, ಸಹ ಶಿಕ್ಷಕ ಸುಕೇಶ, ಅಶೋಕ, ವಸಂತ, ದಿವಾಕರ, ಗಣೇಶ, ಪದ್ಮಲತಾ, ಅರುಣ, ಭಾರತಿಯವರು ಭಾರತ ಮಾತಾ ಪೂಜನದಲ್ಲಿ ಭಾಗವಹಿಸಿದರು.

Related posts

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರ ಭೇಟಿ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!