ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ ಎನಿಸಿದರು.
5 ನೇ ತರಗತಿಯಿಂದ 8 ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೆ ಈ ಸಂವಿಧಾನ ಪುಸ್ತಕ ವಿತರಿಸಲಾಯಿತು. 3 ಮತ್ತು 4 ನೇ ತರಗತಿ ಮಕ್ಕಳಿಗೆ ಪಂಚತಂತ್ರದ ಕತೆ ಪುಸ್ತಕಗಳನ್ನು ಹಾಗೂ 1 ಮತ್ರು 2 ನೆಯ ತರಗತಿ ಮಕ್ಕಳಿಗೆ ಡ್ರಾಯಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.
ಪಟ್ರಮೆ ಡಿವೈಎಫ್ಐ ಅಧ್ಯಕ್ಷ ಭುವನೇಶ್ ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಫ್ಐನ ಪಟ್ರಮೆ ಘಟಕದ ಲೋಕೇಶ್ ಪಚ್ಚೆಮಿ, ಜಯಂತ್, ವಿಶಾಲು ಪಾದೇಜಾಲು, ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ವಿನುಶರಮಣ ಉಪಸ್ಥಿತರಿದ್ದರು.











