24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ ಎನಿಸಿದರು.

5 ನೇ ತರಗತಿಯಿಂದ 8 ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೆ ಈ ಸಂವಿಧಾನ ಪುಸ್ತಕ ವಿತರಿಸಲಾಯಿತು. 3 ಮತ್ತು 4 ನೇ ತರಗತಿ ಮಕ್ಕಳಿಗೆ ಪಂಚತಂತ್ರದ ಕತೆ ಪುಸ್ತಕಗಳನ್ನು ಹಾಗೂ 1 ಮತ್ರು 2 ನೆಯ ತರಗತಿ ಮಕ್ಕಳಿಗೆ ಡ್ರಾಯಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.


ಪಟ್ರಮೆ ಡಿವೈಎಫ್ಐ ಅಧ್ಯಕ್ಷ ಭುವನೇಶ್ ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಫ್ಐನ ಪಟ್ರಮೆ ಘಟಕದ ಲೋಕೇಶ್ ಪಚ್ಚೆಮಿ, ಜಯಂತ್, ವಿಶಾಲು ಪಾದೇಜಾಲು, ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ವಿನುಶರಮಣ ಉಪಸ್ಥಿತರಿದ್ದರು.‌

Related posts

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!