25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಭಾರತದ 79 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸ್ವಾತಂತ್ರೋತ್ಸವದ ದ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕ ವಂ.ಫಾ.ವಿನೋದ್ ಮಸ್ಕರೇನಸ್ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಲಯನ್ ವಸಂತ ಶೆಟ್ಟಿ ಶ್ರದ್ಧ ಪಾಸ್ಟ್ ರೀಜ್ಯನ್ ಚೇರಮಾನ್ ಬೆಳ್ತಂಗಡಿ ಉಪಸ್ಥಿತರಿದ್ದರು. ನಂತರ ಆಯೋಜಿಸಿದ ಸಭಾ ಕಾರ್ಯಾಕ್ರಮವು, ನಿರ್ದೇಶಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ವಂ.ಫಾ.ಜೋಸ್ ಆಯಾಂಕುಡಿ, ಧರ್ಮಗುರುಗಳು, ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲು ಇವರು ಉದ್ಘಾಟಿಸಿ ಶುಭಾಶಯಗಳನ್ನು ಕೋರಿದರು.


ನಂತರ ಸೈಂಟ್ ಮಿಲಾಗ್ರಿಸ್ ಕೋಪರೇಟಿವ್ ಸೊಸೈಟಿ ಬೆಳ್ತಂಗಡಿ ಇಲ್ಲಿನ ಶಾಖಾ ವ್ಯವಸ್ಥಾಪಕ ಸುಮಂತ್ ಎಮ್ ರವರು ಹಾಗೂ ಅಲ್ಲಿನ ಸಿಬ್ಬಂದಿ ವೃಂದದವರು ಆಗಮಿಸಿ ಮಕ್ಕಳಿಗೆ ಸ್ವಾತಂತ್ರೋತ್ಸವದ ಅಂಗವಾಗಿ ಸೊಸೈಟಿಯ ವತಿಯಿಂದ ಶಾಲೆಯ ಎಲ್ಲಾ 150 ಮಕ್ಕಳಿಗೆ ಉಡುಗೊರೆಯನ್ನು ಹಾಗೂ ಸಿಹಿತಿಂಡಿಗಳನ್ನು ನೀಡಿದರು. ನಂತರ ಮಾತನಾಡಿದ ಅವರು ಸಂಸ್ಥೆಗೆ ಶುಭಹಾರೈಸಿ, ಸೈಂಟ್ ಮಿಲಾಗ್ರಿಸ್ ಕೋಪರೇಟಿವ್ ಸೊಸೈಟಿಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
. ಮುರಳಿ ಬಲಿಪ, ಖ್ಯಾತ ನ್ಯಾಯವಾದಿಗಳು ಬೆಳ್ತಂಗಡಿ ಇವರು ಮಾತನಾಡಿ ನಾವು ಇಂದು ಇಂತಹ ಸಮಾರಂಭಗಳನ್ನು ಮಾಡಬೇಕಾದರೆ ಅದಕ್ಕೆ ಮುಖ್ಯ ಕಾರಣಕರ್ತರು ನಮ್ಮ ದೇಶದ ಸೈನಿಕರು ಹಾಗೂ ಅವರು ನಮಗಾಗಿ ಮಾಡಿದ ತ್ಯಾಗ. ಸೈನಿಕರು ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕಾಗಿ ಮಾಡಿದ ಸೇವೆಯನ್ನು ಸ್ಮರಿಸಿ, ದಯಾ ಶಾಲೆಯು ಜಾತಿ, ಮತ ಭೇದವೆನ್ನದೆ ನಮ್ಮ ತಾಲೂಕಿನ ವಿಶೇಷ ಚೇತನ ಮಕ್ಕಳಿಗೆ ಮಾಡುತ್ತಿರುವ ಸೇವೆಯನ್ನು ಶ್ಲಾಘಿಸಿದರು.


ನಂತರ ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ವಂ.ಫಾ.ವಿನೋದ್ ಮಸ್ಕರೇನಸ್ ರವರು ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಿದ ಎಲ್ಲಾ ದಾನಿಗಳನ್ನು, ಸಂಘ ಸಂಸ್ಥೆಗಳನ್ನು ಸ್ಮರಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸ್ಥೆಯನ್ನು ಹಾಗೂ ಮಕ್ಕಳನ್ನು ಪ್ರೋತ್ಸಾಹಿಸಿದ ಎಲ್ಲಾ ಅತಿಥಿಗಣ್ಯರನ್ನು ಅಭಿವಂದಿಸಿದರು.


ಕಾರ್ಯಕ್ರಮದಲ್ಲಿ ದಯಾ ವಿಶೇಷ ಶಾಲೆಯ ಮಕ್ಕಳು ದೇಶ ಪ್ರೇಮವನ್ನು ಪ್ರತಿಬಿಂಬಿಸುವ ವಿವಿಧ ಹಾಡು, ಅಭಿನಯ, ನೃತ್ಯ, ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು. ಇಂದಿನ ಮಧ್ಯಾಹ್ನದ ವಿಶೇಷ ಭೋಜನವನ್ನು ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲು ಇಲ್ಲಿನ ಸೈಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿಯ ವತಿಯಿಂದ ನೀಡಲಾಯಿತು.


ಕಾರ್ಯಕ್ರಮದಲ್ಲಿ ಲಯನ್ ವಸಂತ ಶೆಟ್ಟಿ ಶ್ರದ್ಧ ಪಾಸ್ಟ್ ರೀಜ್ಯನ್ ಚೇರಮಾನ್ ಬೆಳ್ತಂಗಡಿ, ಶಾಲಾ ಮಕ್ಕಳ ಪೋಷಕರ ಪ್ರತಿನಿಧಿಯಾಗಿ ತೋಮಸ್ ಮೇನಾಚೇರಿ, ಮಕ್ಕಳ ಪ್ರತಿನಿಧಿಯಾಗಿ ಕುಮಾರಿ ಮೇಘಾ ಡಿ ಹಾಗೂ ಶಾಲಾ ಮುಖ್ಯ ಶಿಕ್ಷಕರಾದ ಮಿಸ್ ಮೆರಿನ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲಿನ ಸಹ ಗುರುಗಳು ಫಾ. ವಿಲಿಯಂ, ಸೈಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿಯ ಸದಸ್ಯರು, ಸೈಂಟ್ ಮಿಲಾಗ್ರಿಸ್ ಕೋಪರೇಟಿವ್ ಸೊಸೈಟಿಯ ಸಿಬ್ಬಂದಿಗಳು, ಶಾಲಾ ಮಕ್ಕಳ ಪೋಷಕರು, ಸಿ.ಕೆ.ಎಸ್.ಕೆ ಸಿಬ್ಬಂದಿಗಳು, ದಯಾ ಶಾಲೆಯ ಸಿಬ್ಬಂದಿಗಳು ಹಾಗೂ ಮಕ್ಕಳು ಉಪಸ್ಥಿತರಿದ್ದರು.


ಶಿಕ್ಷಕಿ ಧನ್ಯಾ ಕೆ.ವಿ ಸ್ವಾಗತಿಸಿ, ಶಿಕ್ಷಕಿ ಚಿರಂಜೀವಿ ಯವರು ವಂದಿಸಿ, ಶಿಕ್ಷಕಿ ಐಶ್ವರ್ಯ ಹಾಗೂ ಜಯಮಣಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!