23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವವನ್ನು ಹರ್ಷೋಲ್ಲಾಸದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿರ್ಮಲ್ ಕುಮಾರ್ ಅವರು ಸ್ವಾತಂತ್ರ‍್ಯದ ಮಹತ್ವ ಹಾಗೂ ತ್ರಿವರ್ಣ ಧ್ವಜದ ಸಂಕೇತಾರ್ಥಗಳನ್ನು ಮನದಟ್ಟುಗೊಳಿಸಿದರು. ಅವರು, ಧ್ವಜದ ಪ್ರತಿಯೊಂದು ಬಣ್ಣವು ದೇಶದ ಏಕತೆ, ಶಾಂತಿ ಹಾಗೂ ಧೈರ್ಯವನ್ನು ಪ್ರತಿನಿಧಿಸುವುದಾಗಿ ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ ಶಾಂತಿವನ ಟ್ರಸ್ಟಿನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತಾಯ ಅವರು, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಸ್ವಾತಂತ್ರ‍್ಯಸೇನಾನಿಗಳ ತ್ಯಾಗ, ಶೌರ್ಯ ಹಾಗೂ ನಿಸ್ವಾರ್ಥ ಸೇವೆಯನ್ನು ಸ್ಮರಿಸಿದರು. “ಸ್ವಾತಂತ್ರ‍್ಯ ನಮಗೆ ದೊರಕಿದ್ದು ಅನೇಕ ಹೋರಾಟ, ಬಲಿದಾನ ಮತ್ತು ತ್ಯಾಗಗಳ ಫಲ” ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಸ್ವಾಗತ ಭಾಷಣವನ್ನು ಶಾಂತಿವನದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ ಅವರು ನೆರವೇರಿಸಿದರು.
ಶಾಂತಿವನದ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ. ಬಿಂದು ಧನ್ಯವಾದವಿತ್ತರು

ಈ ಸಂದರ್ಭದಲ್ಲಿ ಶಾಂತಿವನದ ಆಡಳಿತಾಧಿಕಾರಿ ಜಗನ್ನಾಥ್ , ಆಸ್ಪತ್ರೆಯ ವ್ಯವಸ್ಥಾಪಕ ಸ್ವಸ್ತಿಕ್ ಅವರು ಸಿಬ್ಬಂದಿವರ್ಗದವರು, ಸಾಧಕರು, ವೈದ್ಯರು, ವೈದ್ಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಾರ್ಯಕ್ರಮವು ದೇಶಭಕ್ತಿಯ ಹಾಡುಗಳು ಹಾಗೂ ಧ್ವಜಾರೋಹಣ ನೆರವೇರಿತು.

Related posts

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya
error: Content is protected !!