24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

ಪರೀಕ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ದೇಶದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯವೈದ್ಯಾಧಿಕಾರಿ ಡಾ| ಗೋಪಾಲ ಪೂಜಾರಿ ಧ್ವಜಾರೋಹಣವನ್ನು ನೆರವೇರಿಸಿ ಶುಭ ಸಂದೇಶದಲ್ಲಿ ಪ್ರಸ್ತುತ ಭಾರತವು ಆನೇಕ ವಿಚಾರಗಳಲ್ಲಿ ಮುಂದುವರಿದ ರಾಷ್ಟ್ರವಾಗಿ ಮುಂದುವರಿದಿದ್ದು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಅನೇಕ ಮಂದಿ ತಮ್ಮ ಬಲಿದಾನವನ್ನು ಮಾಡಿದ್ದು ಆ ಮಹಾತ್ಮರ ನೆನಪನ್ನು ನಾವು ಈ ಸಂದರ್ಭದಲ್ಲಿ ಮಾಡುವುದು ಸೂಕ್ತ ಎಂದು ತಿಳಿಸಿದರು.ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ದೂರದೃಷ್ಠಿಯಿಂದ ಸ್ಥಾಪನೆ ಮಾಡಿದ ಪ್ರಕೃತಿ ಚಿಕಿತ್ಸಾ ಕೇಂದ್ರಗಳು ದೇಶ ವಿದೇಶದಲ್ಲಿ ಪ್ರಖ್ಯಾತಿಯನ್ನು ಪಡೆದು ಔಷಧಿ ರಹಿತ ಚಿಕಿತ್ಸಾ ಪದ್ದತಿಯಾದ ಇದಕ್ಕೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕೂಡ ತನ್ನ ಒಲವು ಹಾಗೂ ಬದ್ದತೆಯನ್ನು ವ್ಯಕ್ತ ಪಡಿಸಿದ್ದರು ಎಂದು ತಿಳಿಸಿದರು.


ಸಾಧಕರಾಗಿ ಅತಿಥಿ ಸ್ಥಾನದಿಂದ ಉಪಸ್ಥಿತರಿದ್ದ ದಿನೇಶ್ ಮೈಸೂರು ರವರು ಶುಭ ಹಾರೈಸಿ ಸೌಖ್ಯವನದ ಬಗ್ಗೆ ತನ್ನ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು.ಡಾ ಶೋಭಿತ್ ಶೆಟ್ಟಿ ಹಾಗೂ ಡಾ ಪೂಜಾ ಜಿ ರವರು ತಮ್ಮ ಅನಿಸಿಕೆಗಳ ಮಾತುಗಳನ್ನಾಡಿದರು.
ಸೌಖ್ಯವನದ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವನ್ನಿತ್ತರು.

Related posts

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya
error: Content is protected !!