23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

ಪರೀಕ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ದೇಶದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯವೈದ್ಯಾಧಿಕಾರಿ ಡಾ| ಗೋಪಾಲ ಪೂಜಾರಿ ಧ್ವಜಾರೋಹಣವನ್ನು ನೆರವೇರಿಸಿ ಶುಭ ಸಂದೇಶದಲ್ಲಿ ಪ್ರಸ್ತುತ ಭಾರತವು ಆನೇಕ ವಿಚಾರಗಳಲ್ಲಿ ಮುಂದುವರಿದ ರಾಷ್ಟ್ರವಾಗಿ ಮುಂದುವರಿದಿದ್ದು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಅನೇಕ ಮಂದಿ ತಮ್ಮ ಬಲಿದಾನವನ್ನು ಮಾಡಿದ್ದು ಆ ಮಹಾತ್ಮರ ನೆನಪನ್ನು ನಾವು ಈ ಸಂದರ್ಭದಲ್ಲಿ ಮಾಡುವುದು ಸೂಕ್ತ ಎಂದು ತಿಳಿಸಿದರು.ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ದೂರದೃಷ್ಠಿಯಿಂದ ಸ್ಥಾಪನೆ ಮಾಡಿದ ಪ್ರಕೃತಿ ಚಿಕಿತ್ಸಾ ಕೇಂದ್ರಗಳು ದೇಶ ವಿದೇಶದಲ್ಲಿ ಪ್ರಖ್ಯಾತಿಯನ್ನು ಪಡೆದು ಔಷಧಿ ರಹಿತ ಚಿಕಿತ್ಸಾ ಪದ್ದತಿಯಾದ ಇದಕ್ಕೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕೂಡ ತನ್ನ ಒಲವು ಹಾಗೂ ಬದ್ದತೆಯನ್ನು ವ್ಯಕ್ತ ಪಡಿಸಿದ್ದರು ಎಂದು ತಿಳಿಸಿದರು.


ಸಾಧಕರಾಗಿ ಅತಿಥಿ ಸ್ಥಾನದಿಂದ ಉಪಸ್ಥಿತರಿದ್ದ ದಿನೇಶ್ ಮೈಸೂರು ರವರು ಶುಭ ಹಾರೈಸಿ ಸೌಖ್ಯವನದ ಬಗ್ಗೆ ತನ್ನ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು.ಡಾ ಶೋಭಿತ್ ಶೆಟ್ಟಿ ಹಾಗೂ ಡಾ ಪೂಜಾ ಜಿ ರವರು ತಮ್ಮ ಅನಿಸಿಕೆಗಳ ಮಾತುಗಳನ್ನಾಡಿದರು.
ಸೌಖ್ಯವನದ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವನ್ನಿತ್ತರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!