22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಶಾಲಾ ಕಾಲೇಜು

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ಸುಮಾರು 50 ವಿದ್ಯಾರ್ಥಿಗಳಿಗೆ ಒಂದು ಜೊತೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ್ ರಾವ್ ರವರ ವತಿಯಿಂದ ಹೊಸದಾಗಿ ಸೇರ್ಪಡೆಗೊಂಡಂತಹ ಸುಮಾರು 50 ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿಕೊಂಡಿದ್ದರು.

ಉಚಿತ ಸಮವಸ್ತ್ರವನ್ನು ವಿತರಿಸಿ ಮಾತನಾಡಿದ ಲಕ್ಷ್ಮೀನಾರಾಯಣ್ ರಾವ್ ರವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು, ಕೇವಲ ಕಲಿಕೆಯಲ್ಲಿ ಮಾತ್ರವಲ್ಲದೆ ಪಠ್ಯೇತರ ವಿಷಯಗಳಲ್ಲಿಯೂ ಕೂಡ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮವಾದಂತಹ ಸಾಧನೆಯನ್ನು ಮಾಡುವಂತಾಗಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಪುಷ್ಪಲತಾ ವಂದಿಸಿದರು. ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು.ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!