22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ ಯಾತ್ರೆ ಪಂಜಿನ ಮೆರವಣಿಗೆ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಮೆರವಣಿಗೆಯಲ್ಲಿ ಪಾಲ್ಗೊಂಡು ಮೂರು ಮಾರ್ಗ ಸ್ಮಾರಕದ ಬಳಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ, ಮಹಾಶಕ್ತಿ ಕೇಂದ್ರ, ಬೂತ್ ಸಮಿತಿ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕಾರಿಣಿ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!