22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ ಅರಣ್ಯ ಉಪವಿಭಾಗ ಹಾಗೂ ಉಪ್ಪಿನಂಗಡಿ ಅರಣ್ಯ ವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹಾಗೂ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜ ಅವರು ಆ.15 ರಂದು ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಕಳೆದ ಜುಲೈ ತಿಂಗಳಲ್ಲಿ ಕೊಕ್ಕಡದ ಸೌತಡ್ಕದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ, ಅವರ ಪತ್ನಿ ಸುಜಾತ ಅವರಿಗೆ 20 ಲಕ್ಷ ರೂ., ಬೆಳೆ ನಾಶ ಮಲವಂತಿಗೆ ಗ್ರಾಮದ ವಸಂತಿ ರೂ.81 ಸಾವಿರ, ಚಾರ್ಮಾಡಿ ಗ್ರಾಮದ ಕುಂಞ ಮಲೆಕುಡಿಯ ಅವರಿಗೆ 1.6, ಲಕ್ಷ ರೂ., ಧರ್ಮಸ್ಥಳ ಗ್ರಾಮದ ಬೋಳಿಯರು ಎಂಬಲ್ಲಿ ಆನೆ ದಾಳಿಯಿಂದ ಆಟೋ ರಿಕ್ಷಾ ನಜ್ಜುಗುಜ್ಜು ಗೊಂಡು ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಅವರಿಗೆ ರೂ.20 ಸಾವಿರ ವಿತರಿಸಲಾಯಿತು.

ಈ ವೇಳೆ ಪುತ್ತೂರು ಉಪ ವಿಭಾಗ ಎಸಿಎಫ್ ಸುಬ್ಬಯ್ಯ ನಾಯ್ಕ್, ಮಂಗಳೂರು ಉಪ ವಿಭಾಗ ಎಸಿಎಫ್ ಶಿವಾನಂದ್ ವಿಭೂತೆ, ಉಪ್ಪಿನಂಗಡಿ ಆರ್.ಎಫ್.ಒ ರಾಘವೇಂದ್ರ ಹಾಗೂ ಬೆಳ್ತಂಗಡಿ ಆರ್.ಎಫ್.ಒ. ತ್ಯಾಗರಾಜ್ ಟಿ.ಎನ್. ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya
error: Content is protected !!