23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ ಅರಣ್ಯ ಉಪವಿಭಾಗ ಹಾಗೂ ಉಪ್ಪಿನಂಗಡಿ ಅರಣ್ಯ ವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹಾಗೂ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜ ಅವರು ಆ.15 ರಂದು ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಕಳೆದ ಜುಲೈ ತಿಂಗಳಲ್ಲಿ ಕೊಕ್ಕಡದ ಸೌತಡ್ಕದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ, ಅವರ ಪತ್ನಿ ಸುಜಾತ ಅವರಿಗೆ 20 ಲಕ್ಷ ರೂ., ಬೆಳೆ ನಾಶ ಮಲವಂತಿಗೆ ಗ್ರಾಮದ ವಸಂತಿ ರೂ.81 ಸಾವಿರ, ಚಾರ್ಮಾಡಿ ಗ್ರಾಮದ ಕುಂಞ ಮಲೆಕುಡಿಯ ಅವರಿಗೆ 1.6, ಲಕ್ಷ ರೂ., ಧರ್ಮಸ್ಥಳ ಗ್ರಾಮದ ಬೋಳಿಯರು ಎಂಬಲ್ಲಿ ಆನೆ ದಾಳಿಯಿಂದ ಆಟೋ ರಿಕ್ಷಾ ನಜ್ಜುಗುಜ್ಜು ಗೊಂಡು ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಅವರಿಗೆ ರೂ.20 ಸಾವಿರ ವಿತರಿಸಲಾಯಿತು.

ಈ ವೇಳೆ ಪುತ್ತೂರು ಉಪ ವಿಭಾಗ ಎಸಿಎಫ್ ಸುಬ್ಬಯ್ಯ ನಾಯ್ಕ್, ಮಂಗಳೂರು ಉಪ ವಿಭಾಗ ಎಸಿಎಫ್ ಶಿವಾನಂದ್ ವಿಭೂತೆ, ಉಪ್ಪಿನಂಗಡಿ ಆರ್.ಎಫ್.ಒ ರಾಘವೇಂದ್ರ ಹಾಗೂ ಬೆಳ್ತಂಗಡಿ ಆರ್.ಎಫ್.ಒ. ತ್ಯಾಗರಾಜ್ ಟಿ.ಎನ್. ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!