25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ಧ್ವಜ ಗೀತೆ ವೇಳೆ ಮಳೆ ಸುರಿದರೂ ಅತಿಥಿಗಳು, ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಎಂಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಹಾಗೂ ವಿದ್ಯಾರ್ಥಿಗಳು ನಿಂತಲ್ಲೇ ನಿಂತು ಮಳೆಗೂ ಒದ್ದೆಯಾದರೂ ಲೆಕ್ಕಿಸದೆ ರಾಷ್ಟ್ರ ಪ್ರೇಮ ಮೆರೆದು ಧ್ವಜಕ್ಕೆ ಗೌರವ ಸೂಚಿಸಿದ್ದು ಗಮನ ಸೆಳೆಯಿತು. ಮಳೆಗೂ ವಿದ್ಯಾರ್ಥಿಗಳು ಘೋಷಣೆ ಕೂಗಿದರೂ.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕುಶಾಲಪ್ಪ ಎಸ್. ಪ್ರಧಾನ ಭಾಷಣ ಮಾಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ಸ್ ಆ್ಯಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಮೂಲಕ ಆಕರ್ಷಕ ಪಥ ಸಂಚಲನ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ರಾಜೇಶ್ ನಿರೂಪಿಸಿದರು.

Related posts

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!