ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ಧ್ವಜ ಗೀತೆ ವೇಳೆ ಮಳೆ ಸುರಿದರೂ ಅತಿಥಿಗಳು, ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಎಂಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಹಾಗೂ ವಿದ್ಯಾರ್ಥಿಗಳು ನಿಂತಲ್ಲೇ ನಿಂತು ಮಳೆಗೂ ಒದ್ದೆಯಾದರೂ ಲೆಕ್ಕಿಸದೆ ರಾಷ್ಟ್ರ ಪ್ರೇಮ ಮೆರೆದು ಧ್ವಜಕ್ಕೆ ಗೌರವ ಸೂಚಿಸಿದ್ದು ಗಮನ ಸೆಳೆಯಿತು. ಮಳೆಗೂ ವಿದ್ಯಾರ್ಥಿಗಳು ಘೋಷಣೆ ಕೂಗಿದರೂ.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕುಶಾಲಪ್ಪ ಎಸ್. ಪ್ರಧಾನ ಭಾಷಣ ಮಾಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ಸ್ ಆ್ಯಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಮೂಲಕ ಆಕರ್ಷಕ ಪಥ ಸಂಚಲನ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ರಾಜೇಶ್ ನಿರೂಪಿಸಿದರು.

Related posts

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya
error: Content is protected !!