24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ದೇಶದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಧ್ವಜಾರೋಹಣದ ಮೂಲಕ ಆಚರಿಸಲಾಯಿತು.

ಗಡಿ ಭದ್ರತಾ ಪಡೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಗಿಲ್ ಯೋಧ ಲಕ್ಷ್ಮಣ.ಜಿ.ಡಿ.ಉಜಿರೆ ಇವರು ಧ್ವಜಾರೋಹಣ ನೆರವೇರಿಸಿ ಸಂದೇಶವನ್ನು ನೀಡಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಝಮೀರ್ ಸಯದಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್, ಸಿ.ಆರ್.ಪಿ.ಗಳಾದ ಶ್ರೀಮತಿ ವಾರಿಜಾ, ಶ್ರೀಮತಿ ಪ್ರತಿಮಾ, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ.ಯ ಸದಸ್ಯರು, ಪೋಷಕರು ಭಾಗವಹಿಸಿದ್ದರು.

ಮಕ್ಕಳಿಂದ ದೇಶಭಕ್ತಿ ಗೀತೆ,ಸಮೂಹ ನೃತ್ಯ, ಭಾಷಣ ಕಾರ್ಯಕ್ರಮಗಳು ನಡೆದವು. ನಿವೃತ್ತ ಯೋಧರನ್ನು ಗೌರವಿಸಲಾಯಿತು. ಮುಖ್ಯಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಚಿತ್ರಾ.ಜೆ.ಕೆ.ಧನ್ಯವಾದ ಸಲ್ಲಿಸಿದರು.

Related posts

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!