37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್ ಮುಂದುಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.


ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

Related posts

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya
error: Content is protected !!