23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್ ಮುಂದುಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.


ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

Related posts

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
error: Content is protected !!