September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್ ಮುಂದುಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.


ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

Related posts

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya
error: Content is protected !!